ಆರುಣಿ ಉದ್ಧಾಲಕ

ಆರುಣಿ ಉದ್ಧಾಲಕನ ಈ ಕಥೆಯು ವ್ಯಾಸಮಹಾಭಾರತದ ಆದಿಪರ್ವದ ಪೌಷ್ಯ ಪರ್ವದಲ್ಲಿ  (ಅಧ್ಯಾಯ ೩) ಬರುತ್ತದೆ. ಈ ಕಥೆಯನ್ನು ನೈಮಿಷಾರಣ್ಯದಲ್ಲಿ ಸೂತ ಪೌರಾಣಿಕ ಉಗ್ರಶ್ರವನು ಶೌನಕಾದಿ ಮುನಿಗಳಿಗೆ ಹೇಳಿದನು.

ಧೌಮ್ಯ ಎನ್ನುವ ಹೆಸರಿನ ಋಷಿಗೆ ಆರುಣಿ ಎಂಬ ಹೆಸರಿನ ಶಿಷ್ಯನಿದ್ದನು. ಒಂದು ದಿನ ಅವನು ಶಿಷ್ಯ ಆರುಣಿ ಪಾಂಚಾಲನನ್ನು “ಹೋಗು. ಭತ್ತದ ಗದ್ದೆಗೆ ಒಡ್ಡನ್ನು ಕಟ್ಟು!” ಎಂದು ಕಳುಹಿಸಿದನು. ಉಪಾಧ್ಯಾಯನಿಂದ ಈ ರೀತಿ ಆದೇಶಪಡೆದ ಪಾಂಚಾಲ ಆರುಣಿಯು ಅಲ್ಲಿಗೆ ಹೋದನು. ಆದರೆ ಭತ್ತದ ಗದ್ದೆಗೆ ಒಡ್ಡನ್ನು ಹಾಕಲು ಅವನಿಗೆ ಸಾದ್ಯವಾಗಲಿಲ್ಲ. “ಕಷ್ಟವಾಯಿತಲ್ಲ!” ಎಂದು ಯೋಚಿಸುತ್ತಿರುವಾಗ ಒಂದು ಉಪಾಯವನ್ನು ಕಂಡನು. “ಈ ರೀತಿ ಮಾಡುತ್ತೇನೆ” ಎಂದು ಅವನು ಭತ್ತದ ಗದ್ದೆಯಲ್ಲಿ ನೀರು ಹರಿಯುವಲ್ಲಿ ಅಡ್ಡಾಗಿ ಮಲಗಿಕೊಂಡನು. ಸ್ವಲ್ಪ ಸಮಯದ ನಂತರ ಅಯೋದ ಧೌಮ್ಯನು ಶಿಷ್ಯರನ್ನು ಕೇಳಿದನು: “ಪಾಂಚಾಲ ಆರುಣಿಯು ಎಲ್ಲಿ ಹೋಗಿದ್ದಾನೆ?”

ಅವರು ಉತ್ತರಿಸಿದರು: “ನೀವೇ ಕಳುಹಿಸಿದಂತೆ ಅವನು ಭತ್ತದ ಗದ್ದೆಗೆ ಒಡ್ಡನ್ನು ಕಟ್ಟಲು ಹೋಗಿದ್ದಾನೆ.” ಶಿಷ್ಯರ ಈ ಮಾತಿಗೆ “ನಾವೆಲ್ಲರೂ ಅವನು ಇದ್ದಲ್ಲಿಗೆ ಹೋಗೋಣ” ಎಂದು ಹೇಳಿ ಅವನು ಅಲ್ಲಿಗೆ ಹೋಗಿ ಗಟ್ಟಿ ಧ್ವನಿಯಲ್ಲಿ ಕೂಗಿ ಕರೆದನು: “ಪಾಂಚಾಲ ಆರುಣ! ಎಲ್ಲಿದ್ದೀಯೆ? ವತ್ಸ! ಇಲ್ಲಿ ಬಾ.”

ಉಪಾದ್ಯಾಯನ ಮಾತುಗಳನ್ನು ಕೇಳಿ ಆರುಣಿಯು ಭತ್ತದ ಗದ್ದೆಯಿಂದ ಮೇಲೆ ಬಂದು ಉಪಾದ್ಯಾಯನ ಎದುರು ನಿಂತು ನಮಸ್ಕರಿಸಿ ಹೇಳಿದನು: “ನಾನು ನೀರು ಹರಿಯುವ ಕಾಲುವೆಯಲ್ಲಿದ್ದೆನು. ಬೇರೆ ಯಾವರೀತಿಯಿಂದಲೂ ನೀರನ್ನು ತಡೆಗಟ್ಟಲು ಅಸಮರ್ಥನಾಗಿ ನಾನೇ ಸ್ವತಃ ಕಾಲುವೆಯ ಅಡ್ಡ ಮಲಗಿಕೊಂಡು ನೀರು ಹರಿಯದಂತೆ ತಡೆಗಟ್ಟಿದೆ. ನಿಮ್ಮ ಧ್ವನಿಯನ್ನು ಕೇಳಿ ಎದ್ದು ನೀರುಹರಿಯಲು ಬಿಟ್ಟೆ. ಭಗವನ್! ನಿಮಗೆ ಅಭಿವಾದಿಸುತ್ತೇನೆ. ಆಜ್ಞೆಯನ್ನು ನೀಡಿ. ನಾನೀಗ ಏನು ಮಾಡಲಿ?”

ಆಗ ಉಪಾದ್ಯಾಯನು ಹೇಳಿದನು: “ನೀನು ಭತ್ತದ ಗದ್ದೆಯ ಕಾಲುವೆಯಲ್ಲಿ ಅಡ್ಡ ಮಲಗಿ ನೀರು ಹರಿಯುವುದನ್ನು ನಿಲ್ಲಿಸಿದ್ದೀಯೆ. ಆದುದರಿಂದ ನಿನ್ನ ಹೆಸರು ಇನ್ನು ಮುಂದೆ ಉದ್ದಾಲಕ ಎಂದಾಗಲಿ.” ಉಪಾದ್ಯಾಯನು ಅವನಿಗೆ ಈ ರೀತಿ ಅನುಗ್ರಹವಿತ್ತನು: “ನನ್ನ ವಚನವನ್ನು ಪರಿಪಾಲಿಸಿದುದಕ್ಕಾಗಿ ನಿನಗೆ ಶ್ರೇಯಸ್ಸು ದೊರೆಯುತ್ತದೆ. ಸರ್ವ ವೇದಗಳು ಮತ್ತು ಸರ್ವ ಧರ್ಮಶಾಸ್ತ್ರಗಳು ನಿನ್ನಲ್ಲಿ ಪ್ರತಿಭೆಗೊಳ್ಳುತ್ತವೆ.”

ಉಪಾದ್ಯಾಯನ ಈ ಮಾತುಗಳನ್ನು ಕೇಳಿ ಅವನು ತನಗೆ ಇಷ್ಟಬಂದ ದೇಶಕ್ಕೆ ಹೊರಟುಹೋದನು.

The other stories:

  1. ಆರುಣಿ ಉದ್ದಾಲಕ
  2. ಉಪಮನ್ಯು
  3. ಸಮುದ್ರಮಥನ
  4. ಗರುಡೋತ್ಪತ್ತಿ; ಅಮೃತಹರಣ
  5. ಶೇಷ
  6. ಯಯಾತಿ
  7. ಸಂವರಣ-ತಪತಿ
  8. ವಸಿಷ್ಠೋಪಾಽಖ್ಯಾನ
  9. ಔರ್ವೋಪಾಽಖ್ಯಾನ
  10. ಸುಂದೋಪಸುಂದೋಪಾಽಖ್ಯಾನ
  11. ಸಾರಂಗಗಳು
  12. ಸೌಭವಧೋಪಾಽಖ್ಯಾನ
  13. ನಲೋಪಾಽಖ್ಯಾನ
  14. ಅಗಸ್ತ್ಯೋಪಾಽಖ್ಯಾನ
  15. ಭಗೀರಥ
  16. ಋಷ್ಯಶೃಂಗ
  17. ಪರಶುರಾಮ
  18. ಚ್ಯವನ
  19. ಮಾಂಧಾತ
  20. ಸೋಮಕ-ಜಂತು
  21. ಗಿಡುಗ-ಪಾರಿವಾಳ
  22. ಅಷ್ಟಾವಕ್ರ
  23. ರೈಭ್ಯ-ಯವಕ್ರೀತ
  24. ತಾರ್ಕ್ಷ್ಯ ಅರಿಷ್ಠನೇಮಿ
  25. ಅತ್ರಿ
  26. ವೈವಸ್ವತ ಮನು
  27. ಮಂಡೂಕ-ವಾಮದೇವ
  28. ಧುಂಧುಮಾರ
  29. ಮಧು-ಕೈಟಭ ವಧೆ
  30. ಕಾರ್ತಿಕೇಯನ ಜನ್ಮ
  31. ಮುದ್ಗಲ
  32. ರಾಮೋಪಾಽಖ್ಯಾನ: ರಾಮಕಥೆ
  33. ಪತಿವ್ರತಾಮಹಾತ್ಮೆ: ಸಾವಿತ್ರಿ-ಸತ್ಯವಾನರ ಕಥೆ
  34. ಇಂದ್ರವಿಜಯೋಪಾಽಖ್ಯಾನ
  35. ದಂಬೋದ್ಭವ
  36. ಮಾತಲಿವರಾನ್ವೇಷಣೆ
  37. ಗಾಲವ ಚರಿತೆ
  38. ವಿದುಲೋಪಾಽಖ್ಯಾನ
  39. ತ್ರಿಪುರವಧೋಪಾಽಖ್ಯಾನ
  40. ಪರಶುರಾಮನು ಅಸ್ತ್ರಗಳನ್ನು ಪಡೆದುದು
  41. ಪ್ರಭಾಸಕ್ಷೇತ್ರ ಮಹಾತ್ಮೆ
  42. ತ್ರಿತಾಖ್ಯಾನ
  43. ಸಾರಸ್ವತೋಪಾಽಖ್ಯಾನ
  44. ವಿಶ್ವಾಮಿತ್ರ
  45. ವಸಿಷ್ಠಾಪವಾಹ ಚರಿತ್ರೆ
  46. ಬಕ ದಾಲ್ಭ್ಯನ ಚರಿತ್ರೆ
  47. ಕಪಾಲಮೋಚನತೀರ್ಥ ಮಹಾತ್ಮೆ
  48. ಮಂಕಣಕ
  49. ವೃದ್ಧಕನ್ಯೆ
  50. ಬದರಿಪಾಚನ ತೀರ್ಥ
  51. ಕುಮಾರನ ಪ್ರಭಾವ-ಅಭಿಷೇಕ
  52. ಅಸಿತದೇವಲ-ಜೇಗೀಷವ್ಯರ ಕಥೆ
  53. ಮಹರ್ಷಿ ದಧೀಚಿ ಮತ್ತು ಸಾರಸ್ವತ ಮುನಿ
  54. ಕುರುಕ್ಷೇತ್ರ ಮಹಾತ್ಮೆ
  55. ಶಂಖಲಿಖಿತೋಪಾಽಖ್ಯಾನ
  56. ಜಾಮದಗ್ನೇಯೋಪಾಽಖ್ಯಾನ
  57. ಷೋಡಶರಾಜಕೀಯೋಪಾಽಖ್ಯಾನ
  58. ನೃಗೋಽಪಾಖ್ಯಾನ 

Leave a Reply

Your email address will not be published. Required fields are marked *